ನುಡಿ

Language

ಮುಗ್ಧ ಮನಸ್ಸುಗಳ ಸಾಕ್ಷಾತ್ಕಾರವೇ ಸಾಕೇತ ಸಿದ್ಧಾಂತ, ಒಂದು ಸಂದೇಶ

[ಮೊನ್ನೆ ತಾನೆ ಕನ್ನಡ ಕಲಿಯ ಬಿತ್ತರಿಕೆ ಬಿಕಾಸ ೧೧-೨೦೨೩-೦೧ರಲ್ಲಿ ನಿಮಗೆ ಪರಿಚಯಿಸಿದ ಸಾಕೇತ ಸಿದ್ದಾಂತಕ್ಕೆ ಸ್ಪಂದಿಸಿ ಒಂದು ಸಂದೇಶವನ್ನು, ಲಲಿತ ಪ್ರಬಂಧವನ್ನು ಅನ್ನಿ, ಕಳಿಸಿದ್ದಾರೆ ರೂಪ ಮಂಜುನಾಥ. ಕರ್ನಾಟಕ ಸಾಂಸ್ಕೃತಿಕ ಸಂಘದ ಸುವರ್ಣ ಮಹೋತ್ಸವ‌ ಕಾರ್ಯಕ್ರಮದ ಕವಿಗೋಷ್ಠಿಯಲ್ಲಿ, ಕವನ ಓದಿದ ಮಕ್ಕಳ ಬಗ್ಗೆ, ಅವರನ್ನು ಬೆಳೆಸಿದ ತಾಯಿ ತಂದೆಯರ ಬಗ್ಗೆ, ಅರಳು ಮಲ್ಲಿಗೆ ಮತ್ತು ಗೋಕುಲ ಮಕ್ಕಳು ಎನ್ನುವ ಪುಟ್ಟ ಕನ್ನಡ ಸಾಂಸ್ಕೃತಿಕ ಸಮುದಾಯಗಳ ಬಗ್ಗೆ, ಹಾಗೂ ಸಾಕೇತ ಸಿದ್ಧಾಂತರ ಕವನಗಳನ್ನು ಪ್ರಕಟಿಸಿದ ಕನ್ನಡ ಕೂಟದ ಸ್ಮರಣ ಸಂಚಿಕೆಯ ಬಗ್ಗೆ, ತಮ್ಮ ಅನಿಸಿಕೆಗಳನ್ನು ಇಲ್ಲಿ ತೆರೆದಿಟ್ಟಿದ್ದಾರೆ. ]

ರೂಪ ಮಂಜುನಾಥ

ಕನ್ಸಡಕ್ಕೊಂದು ಸಾಕೇತ ಸಿದ್ಧಾಂತ

ಕನ್ನಡಕ್ಕೊಂದು

ಸಾಕೇತ ಸಿದ್ಧಾಂತ

ಏನಿದು ಸಾಕೇತ ಸಿದ್ಧಾಂತ?‌
ಕನ್ನಡ ಕೇವಲ ಒಂದು ವ್ಯಾವಹಾರಿಕ ಮಾಧ್ಯಮವೋ?‌ ಆಥವ ಅದಕ್ಕಿಂತ ಮಿಗಿಲಾದ ಮೌಲ್ಯ ಏನಾದರೂ ಅದರಲ್ಲಿ ಇದೆಯೆ?ಕನ್ನಡ ಕಲಿಯಲು ಅತ್ಯಂತ ಪರಿಣಾಮಕಾರಿ ವಿಧಾನ ಯಾವುದು?

 

ನಮ್ಮ ನಡುವಿದ್ದ ನಾಡೋಜ

ನಮ್ಮ ನಡುವಿದ್ದ ನಾಡೋಜ

[ ಇಂದು, ಡಿಸೆಂಬರ ೨೮, ಕನ್ನಡದ ಹೊಸ ಬೆಳಕು ಮೂಡಿದ ದಿನ. ಶ್ರೀನಿವಾಸ ಎಂಬ ಒಬ್ಬ ಹಳ್ಳಿಯ ಬಡ ಹುಡುಗ, ಹುಟ್ಟಿದ ದಿನ. ಎಲ್ಲ ಕಷ್ಟಗಳನ್ನೂ ಮೀರಿ, ತನ್ನ ಕಲಿಯುವ ಉತ್ಕಟತೆ, ಪುಸ್ತಕ ಪ್ರೇಮ, ಮತ್ತು ಹೊಸತನದ ಹಂಬಲಗಳಿಂದ ಒಬ್ಬ ಉತ್ಕೃಷ್ಟ ಸಂಶೋಧಕನಾಗಿ, ಸಂಶೋಧನೆಗೇ ಒಂದು ಹೊಸ ಆಯಾಮವನ್ನು ಜೋಡಿಸಿ, ನಾಡೋಜನಾಗಿ ಬೆಳೆದು ನಿಂತ ಕತೆ ಇದು. ಕನ್ನಡ ಕಲಿಗಳಿಗಷ್ಟೆ ಅಲ್ಲ,ಎಲ್ಲರಿಗೂ ಸ್ಫೂರ್ತಿ ನೀಡುವ,ಡಾ. ಶ್ರೀನಿವಾಸ ಹಾವನೂರರನ್ನು ಇದಕ್ಕಿಂತ ಹತ್ತಿರವಾಗಿ ಕಂಡು ಹೇಳಿದ ಕತೆ ನಿಮಗೆ ಬೇರೆ ಎಲ್ಲಿಯೂ ಸಿಗದು. – ಸಂ.]

ಬರವಣಿಗೆಯಲ್ಲಿ ಮತ್ತು ಉಚ್ಚಾರದಲ್ಲಿ ಭಾಷಾ ಶುದ್ಧಿಯ ವಿಚಾರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೆಲೆಸಿರುವ ಕೆ.ಟಿ. ಗಟ್ಟಿ ಚಿಂತನಶೀಲ ಬರಹಗಾರರು. ಭಾಷೆಯ ಕಲಿಕೆ, ಉಳಿವು, ಅಳಿವು, ಮತ್ತು ಬೆಳವಣಿಗೆಗಳಲ್ಲಿ ಇವರಿಗೆ ಆಸಕ್ತಿ. ಕಾದಂಬರಿ, ಕಥೆ, ಕವನ, ಪ್ರಬಂಧ, ಪ್ರವಾಸ ಕಥನ ಇತ್ಯಾದಿ ಐವತ್ತಕ್ಕು ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಹದಿನೇಳನೆಯ ವಯಸ್ಸಿನಲ್ಲೆ ಅಧ್ಯಾಪಕರಾಗಿ ಸುಮಾರು ನಲವತ್ತು ವರ್ಷಗಳ ಅನುಭವ ಹೊಂದಿದ್ದಾರೆ. ಆದನ್ನೆ ಈಗ ಕನ್ನಡ ಕಲಿಸುವವರಿಗೆ ಕಿವಿಮಾತಾಗಿ ಹಂಚಿಕೊಂಡಿದ್ದಾರೆ

ಕನ್ನಡ ಕಲಿಗಾಗಿ ಬರೆದ ಈ ವಿಶೇಷ ಲೇಖನದಲ್ಲಿ ೧೧ವಿಚಾರಗಳನ್ನು ಹರವಿದ್ದಾರೆ. ‘ನುರಿತ’ ಬರಹಗಾರರೂ ಸಾಮಾನ್ಯವಾಗಿ ಎಸಗುವ ಈ ಅನೇಕ ಪ್ರಮಾದಗಳನ್ನು ಕನ್ನಡ ಕಲಿಗಳು ಗಮನಿಸುವುದು ಅವಶ್ಯ. ಓದಿ ನೋಡಿ; ನಿಮ್ಮ ವಿಚಾರ ಏನು ಬರೆದು ತಿಳಿಸಿ.

ಕೆ.ಟಿ. ಗಟ್ಟಿ - ಕನ್ನಡದ ಬಂಗಾರ ಗಟ್ಟಿ

[ಹೊಸ ವಿಷಾದನೀಯ ಸುದ್ದಿ: ಜುಲೈ ೨೨, ೧೩೮ರಂದು ಜನಿಸಿದ, ಕೆ.ಟಿ.ಗಟ್ಟಿ ಅವರು ಫೆಬ್ರುವರಿ ೧೯, ೨೦೨೪ರಂದು ಮಂಗಳೂರಿನಲ್ಲಿ ತಮ್ಮ ೮೫ನೆ ವಯಸ್ಸಿನಲ್ಲಿ ನಿಧನರಾದರು.]

ಭಾಷೆ, ಲಿಪಿ, ಮತ್ತು ಕಲಿಕೆ – ಒಂದು ವಿಶ್ಲೇಷಣೆ

ಭಾಷೆ ಅಂದರೇನು? ಮಾತಾಡುವುದೊ? ಬರೆಯುವುದೊ? ನುಡಿಯೊ? ಲಿಪಿಯೊ? ಪದ ವಾಕ್ಯಗಳೋ? ಅರ್ಥವೋ? ಇವಾವೂ ಅಲ್ಲದ ಅಮೂರ್ತ ಸಂವಹನವೋ?
 
ಇಬ್ಬರ ನಡುವೆ ಭಾಷೆ ಬೇಕು. ಗಣಿತ, ವಿಜ್ಞಾನ, ಕಲೆ – ಯಾವುದಕ್ಕೂ ಭಾಷೆ ಬೇಕು. ಆಲೋಚಿಸಲೂ ಭಾಷೆ ಬೇಕು! ಅಂತೂ ಇದು ಮನುಷ್ಯನ ಬದುಕಿಗೆ, ಬಾಳಿಗೆ, ಉನ್ನತಿಗೆ ಅವಶ್ಯವಾದದ್ದು. ಹಾಗಾದರೆ ಭಾಷೆಯನ್ನು ಕಲಿಯುವುದು ಹೇಗೆ? ಒಂದು ಭಾಷೆಯನ್ನು ಕಲಿಯಲು ಮಾಧ್ಯಮವಾಗಿ ಇನ್ನೊಂದು ಭಾಷೆ ಅಗತ್ಯವೆ? ಸೂಕ್ತವಾದ ಮಾಧ್ಯಮ ಭಾಷೆ ಯಾವುದು?