ಅನಿಸಿಕೆ

Opinion/Reflections

ಈಗಿನ ತತ್ತ್ವವಿದ್ಯಾಭ್ಯಾಸಕ್ಕೆ ಕೆಲವು "ರೋಮಾಂಚಕ ದಿಗಂತಗಳು”

“ಬ್ರಹ್ಮ ಮೀಮಾಂಸೆ”, “ಸಾಯುಜ್ಯಮುಕ್ತಿ”, “ಪರವಿದ್ಯೆ” ವಿಧದ ಶಬ್ದಾಡಂಬರದಿಂದಲೂ, “ಆಧಿದೈವಿಕ-ಆಧ್ಯಾತ್ಮಿಕ” “ಅಂಬರ”ದಿಂದಲೂ, ಈ ನಮ್ಮ ಭೌತಿಕ-ಜೈವಿಕ-ಮಾನವಿಕ “ಧರೆ”ಗಿಳಿದು, ಜೀರ್ಣ-ಸಂಕುಚಿತ-ಸಾಂಪ್ರದಾಯಿಕ ಮತಗಳ ಅಂಕೆಗಳನ್ನು ಹಾಯ್ದು, ಜ್ಞಾನದ ಎಲ್ಲೆಗಳನ್ನು ದಂಗಾಗಿಸುವಂತೆ ದೌಡಾಯಿಸಿ ದೂಡುತ್ತಿರುವ ವಿಜ್ಞಾನವನ್ನು ಸಂಗಾತಿಯಾಗಿಸಿಕೊಂಡು, ಇಹಲೌಕಿಕ, ಜೀವಂತ-ಜ್ವಲಂತ ಸಮಸ್ಯೆಗಳಿಗೆ ಮಿಡಿಯುವಂತೆಯೂ, ಸಮಾಜದ ತಳಮಟ್ಟವನ್ನು ಮುಟ್ಟುವಂತೆಯೂ, ಸಮಷ್ಟಿಯನ್ನೇ ತಬ್ಬಿಕೊಳ್ಳುವಂತೆಯೂ, ನಿಮ್ಮ ಮುಕ್ತ-ಉದಾತ್ತ ಆಲೋಚನೆಗಳು ಹೊಮ್ಮಿ ಹರಿಯಲಿ!

ನಮೋ ಎನ್ನಿರೇ ನಮೋ! ನೀ ಹಲೋ ಎಂದರೆ ನಾ ನಮೋ!

ದೂರವಾಣಿ "ಟ್ರಿನ್ ಟ್ರಿನ್" ಎಂದ ತಕ್ಷಣ "ಹಲೋ!" ಎನ್ನುವುದು ಸಾಮಾನ್ಯ. ಹಲೋ(ಹೆಲೋ hello) ಎಂದರೆ ಏನು? ಇದರ ಉತ್ಪತ್ತಿ ಹೇಗೆ? ಹಲೋ ಎನ್ನುವ ಶಬ್ದ ಬಳಕೆಯಲ್ಲಿ ಬಂದದ್ದು ಹೇಗೆ? ಇದನ್ನು ಕಂಡು ಹಿಡಿದವರು ಯಾರು? ಇದು ಅಚ್ಚಗನ್ನಡ ಪದವೆ? ಅಲ್ಲವಾದರೆ ಇದಕ್ಕೊಂದು ಅಚ್ಚಗನ್ನಡದ ಸಮಾನ ಪದ ಇದೆಯೆ?

ಈತ ಸತ್ಯನಾರಾಯಣ!

[ ಸತ್ಯನಾರಾಯಣ ಅಂದರೆ ಯಾರು? ಉಳಿದ ನಾರಾಯಣರೆಲ್ಲ ಸುಳ್ಳು ದೇವರುಗಳೆ? ಈತ ವೇದ ಪುರಾಣಗಳಲ್ಲಿ ಇಲ್ಲ! ಹಾಗಾದರೆ ಈತ ಹುಟ್ಟಿಕೊಂಡದ್ದು ಹೇಗೆ? ಯಾವಾಗ? ನಿಜವೋ ಮೂಢ ನಂಬಿಕೆಯೋ, ಒಳ್ಳಯದೋ ಕೆಟ್ಟದ್ದೋ? ಈತ ವಿಷ್ಣುವೆ? ಕೋಟಿ ದೇವ-ದೇವತೆಗಳಲ್ಲಿ ಈತನ ಸ್ಥಾನ ಯಾವುದು? ಈತನ ಜನಪ್ರಿಯತೆಯ ಗುಟ್ಟೇನು? ಹೀಗೆ, ಹಾವನೂರರು ಈ ಲೇಖನದಲ್ಲಿ ಸತ್ಯನಾರಾಯಣನ ಸತ್ಯಾಸತ್ಯತೆಯನ್ನೆ ಕೆದಕಿ ನೋಡಿದ್ದಾರೆ. - ಸಂ.]

ನುಡಿದರೆ ಮುತ್ತಿನ ಹಾರ

ಏನು ನುಡಿಯುತ್ತೀರೋ ಅದೇ ನೀವು! ಮಾತಿನ ಮಹತ್ವ ಅಷ್ಟಿದೆ. ಪ್ರಪಂಚದ ವ್ಯವಹಾರಗಳೆಲ್ಲವೂ ಮಾತಿನಿಂದಲೇ. ಮಾತಿನಿಂದಲೆ ಗಳಿಕೆ, ಮಾತಿನಿಂದಲೆ ಉಳಿಕೆ. ಮಾತಿನಿಂದಲೆ ತಿಳಿವು, ಮಾತಿನಿಂದಲೆ ಅಳಿವು. ಹಾಗಾದರೆ ನುಡಿ ಅಂದರೇನು? ಮಾತಿನ ಮಹತ್ವ ಏನು? ನಮ್ಮ ನುಡಿ ಹೇಗಿರಬೇಕು? ವಚನ ಸುಭಾಷಿತ ಸ್ಮೃತಿಗಳು ಏನನ್ನುತ್ತವೆ?

ಹುಚ್ಚರಣೆ: ದಾಸರನ್ನು ಆಡಿ ಕೊಲ್ಲಿರೋ! ಮತ್ತು ಕನ್ನಡದ ಏಳು ಅಪಸ್ವರಗಳು

[ ಕನ್ನಡವೆಂಬುದು ಮಂತ್ರ ಕಣಾ!
ಹೌದು. ಕನ್ನಡ ಉಚ್ಚಾರ ಸೂಕ್ಷ್ಮವಾದದ್ದು. ಉಚ್ಚಾರದಲ್ಲಿ ನಿಖರತೆ, ಸ್ಪಷ್ಟತೆ, ಒತ್ತು, ಬಿಗಿ, ಮತ್ತು ವಿರಾಮಗಳು ಅವಶ್ಯ. ಉಚ್ಚಾರ ಸರಿ ಇರದಿದ್ದರೆ, ಯಾವ ವೃತ್ತಾಸುರ ಉದ್ಭವಿಸದಿದ್ದರೂ, ಅಪಾರ್ಥ, ಅನಾಹುತ, ಆಭಾಸ, ಇಲ್ಲವೆ ನಗೆಪಾಟಲು ಕಟ್ಟಿಟ್ಟ ಬುತ್ತಿ. - ಸಂ.]

ಅಪೇಕ್ಷೆ ಇಲ್ಲದೆ ಪ್ರೀತಿಸಲು ಸಾಧ್ಯವೇ?

[ ಮನುಷ್ಯ ಜಾತಿಗೆ ವಿಶಿಷ್ಟವಾದವುಗಳಲ್ಲಿ ಪ್ರೀತಿ ಕೂಡ ಒಂದು. ಪ್ರೀತಿ ಎಂದರೆ ಏನು? ಪ್ರೀತಿ ಒಂದು ಅನುಭವ. ಭೌತಿಕ, ಮಾನಸಿಕ, ಮತ್ತು ಅಧ್ಯಾತ್ಮಿಕ ಸ್ತರಗಳಲ್ಲಿ, ಅವರವರ ಪ್ರೀತಿ ಅವರವರ ಅನುಭವಕ್ಕೆ ಸೀಮಿತ. ಸಾರ್ವತ್ರಿಕವಾಗಿ ಅದು ಹೀಗೇ ಇರಬೇಕು ಎಂದು ಹೇಳಲಾಗುವುದಿಲ್ಲ. ಆದರೂ, ಪ್ರೀತಿಗೂ ಅಪೇಕ್ಷೆಗೂ ನಂಟು ಸಹಜ. ಪ್ರೀತಿಯ ಬಗ್ಗೆ ಅನೇಕ ವಾದಗಳು ಇವೆ. ಅಪೇಕ್ಷೆಯೇ ಪ್ರೀತಿ ಎಂದು ಒಂದು ಸಾಧಿಸಿದರೆ ನಿರಪೇಕ್ಷ ಪ್ರೀತಿಯೇ ಪ್ರೀತಿ ಎನ್ನುತ್ತದೆ ಮತ್ತೊಂದು. ಅಲ್ಲದೆ, "ಪ್ರೀತಿ ಒಂದು ಹುಚ್ಚು ಚಟ" ಎಂದು ಹೇಳುತ್ತಾನೆ ಮಂಕುತಿಮ್ಮ. ನಿಮ್ಮ ಪ್ರೀತಿ ಎಂಥದ್ದು? ನಿಮ್ಮ ಅಪೇಕ್ಷೆಗಳೇನು? ವಿವೇಕ ಬೆಟ್ಕುಳಿ ಅವರ ಈ ಪ್ರೀತಿ ಲೇಖನವನ್ನು ಓದಿ, ಅವರ ದನಿಯಲ್ಲೆ ಕೇಳಿ; ಪ್ರೀತಿಯ ಮೂಲವನ್ನು ಕಂಡುಕೊಳ್ಳಿ- ಸಂ.]

ಸ್ತ್ರೀ ಸಂವೇದನೆ ಮತ್ತು ಸ್ತ್ರೀತ್ವ ವಾದ

ಸ್ತ್ರೀಯನ್ನು ದೇವತೆ ಎಂದೂ, "ಮಾತೃ ದೇವೋ ಭವ" ಎಂದೂ ಕರೆದ ಸನಾತನ ಧರ್ಮ ಅದೇ ಉಸುರಿನಲ್ಲಿ "ನ ಸ್ತ್ರೀ ಸ್ವಾತಂತ್ರ್ಯಮರ್ಹತಿ" ಎಂದೂ ಗಂಡ ತೀರಿದ ಹೆಣ್ಣು ಮುಂಡೆ ಎಂದೂ ಘೋಷಿಸುತ್ತದೆ. ಕಾಲ ಬದಲಾಗಿದೆ. ಹೆಣ್ಣು ಮಕ್ಕಳು ಈಗ ವಿದ್ಯಾವಂತರಾಗಿದ್ದಾರೆ, ಸರಿ ಸುಮಾರಾಗಿ ಕೆಲಸ ಮಾಡುತ್ತಿದ್ದಾರೆ, ಆರ್ಥಿಕವಾಗಿ ಸುಧಾರಿಸಿದ್ದಾರೆ. ಆದರೂ, ಕೌಟುಂಬಿಕ ಮತ್ತು ಸಾಮಾಜಿಕ ವಲಯಗಳಲ್ಲಿ ಅಸಮಾನಳು, ದೌರ್ಜನ್ಯಪೀಡಿತಳು.‌ ಹೊಣೆ ಹೆಚ್ಚಾಗಿದೆ; ಅದಕ್ಕೆ ತಕ್ಕಂತೆ ನೆಮ್ಮದಿ ಸಿಗುತ್ತಿಲ್ಲ. ಸ್ತ್ರೀ-ಪುರುಷರ ಅ-ಸಮೀಕರಣಗಳಲ್ಲಿ ತೃತೀಯ ಲಿಂಗವೂ ಸೇರಿ ಸಮಸ್ಯೆಯನ್ನು ತೊಡಕುಗೊಳಿಸಿದೆ. ಇದಕ್ಕೆ ಉತ್ತರ ಎನ್ನುವಂತೆ ಸ್ತ್ರೀತ್ವವಾದ ಮುಂದೆ ಬಂದಿದೆ. ಏನಿದು? ಇಲ್ಲಿ ಶ್ರೀನಿವಾಸ ಭಟ್ಟರು ಹೇಳುವ, ಸ್ತ್ರೀತ್ವ ಮತ್ತು ಸ್ತ್ರೀ ಸಂವೇದನೆಗಳ ಸಮ್ಮಿಶ್ರಣವೆ ಸುಖ ಶಾಂತಿ ಸಮೃದ್ಧಿಗಳಿಗೆ ಸಮರ್ಪಕ ರಸಾಯನವೆ? ಸಮೀಕರಣ ಸಾಧ್ಯವೆ? ಸಮತ್ವ ಸಾಧುವೆ? - ಸಂ

ಗುರಿ ತಪ್ಪುತ್ತಿರುವ ಗುರುಗಳಿಂದ ಗುರುಕುಲಕ್ಕೇ ಅವಮಾನ

ಎಲ್ಲ ಶಿಕ಼ಕರೂ ಹೀಗಲ್ಲ ಅಂತ ಸಮಸ್ಯೆಯನ್ನೆ ತೊಡೆದು ಹಾಕುವುದು ಸರಿ ಅಲ್ಲ.  ಶೈಕ್ಷಣಿಕ ಕೊರತೆ, ಅವಕಾಶ ವಂಚನೆ, ಅನ್ಯಾಯ, ಅಥವ ಅನಾಹುತ ಒಂದೇ ಮಗುವಿಗೆ ಆದರೂ ಅದು ಸಮಾಜದ ಸೋಲು.

ಮುಗ್ಧ ಮನಸ್ಸುಗಳ ಸಾಕ್ಷಾತ್ಕಾರವೇ ಸಾಕೇತ ಸಿದ್ಧಾಂತ, ಒಂದು ಸಂದೇಶ

[ಮೊನ್ನೆ ತಾನೆ ಕನ್ನಡ ಕಲಿಯ ಬಿತ್ತರಿಕೆ ಬಿಕಾಸ ೧೧-೨೦೨೩-೦೧ರಲ್ಲಿ ನಿಮಗೆ ಪರಿಚಯಿಸಿದ ಸಾಕೇತ ಸಿದ್ದಾಂತಕ್ಕೆ ಸ್ಪಂದಿಸಿ ಒಂದು ಸಂದೇಶವನ್ನು, ಲಲಿತ ಪ್ರಬಂಧವನ್ನು ಅನ್ನಿ, ಕಳಿಸಿದ್ದಾರೆ ರೂಪ ಮಂಜುನಾಥ. ಕರ್ನಾಟಕ ಸಾಂಸ್ಕೃತಿಕ ಸಂಘದ ಸುವರ್ಣ ಮಹೋತ್ಸವ‌ ಕಾರ್ಯಕ್ರಮದ ಕವಿಗೋಷ್ಠಿಯಲ್ಲಿ, ಕವನ ಓದಿದ ಮಕ್ಕಳ ಬಗ್ಗೆ, ಅವರನ್ನು ಬೆಳೆಸಿದ ತಾಯಿ ತಂದೆಯರ ಬಗ್ಗೆ, ಅರಳು ಮಲ್ಲಿಗೆ ಮತ್ತು ಗೋಕುಲ ಮಕ್ಕಳು ಎನ್ನುವ ಪುಟ್ಟ ಕನ್ನಡ ಸಾಂಸ್ಕೃತಿಕ ಸಮುದಾಯಗಳ ಬಗ್ಗೆ, ಹಾಗೂ ಸಾಕೇತ ಸಿದ್ಧಾಂತರ ಕವನಗಳನ್ನು ಪ್ರಕಟಿಸಿದ ಕನ್ನಡ ಕೂಟದ ಸ್ಮರಣ ಸಂಚಿಕೆಯ ಬಗ್ಗೆ, ತಮ್ಮ ಅನಿಸಿಕೆಗಳನ್ನು ಇಲ್ಲಿ ತೆರೆದಿಟ್ಟಿದ್ದಾರೆ. ]

ರೂಪ ಮಂಜುನಾಥ

ಕನ್ಸಡಕ್ಕೊಂದು ಸಾಕೇತ ಸಿದ್ಧಾಂತ

ಕನ್ನಡಕ್ಕೊಂದು

ಸಾಕೇತ ಸಿದ್ಧಾಂತ

ಏನಿದು ಸಾಕೇತ ಸಿದ್ಧಾಂತ?‌
ಕನ್ನಡ ಕೇವಲ ಒಂದು ವ್ಯಾವಹಾರಿಕ ಮಾಧ್ಯಮವೋ?‌ ಆಥವ ಅದಕ್ಕಿಂತ ಮಿಗಿಲಾದ ಮೌಲ್ಯ ಏನಾದರೂ ಅದರಲ್ಲಿ ಇದೆಯೆ?ಕನ್ನಡ ಕಲಿಯಲು ಅತ್ಯಂತ ಪರಿಣಾಮಕಾರಿ ವಿಧಾನ ಯಾವುದು?